
ಶಾಸ್ತ್ರ : ಜೀರ್ಣ ದೇವಸ್ಥಾನಗಳಿರುವ ಸ್ಥಳಗಳಲ್ಲಿ ಮಲಮೂತ್ರ ವಿಸರ್ಜನೆ ಮಾಡುವುದರಿಂದ ರಜ-ತಮಾತ್ಮಕ ಲಹರಿಗಳು ಮತ್ತು ವಾಯುಗಳು ಹರಡಿ ಪವಿತ್ರ ವಾಯುಮಂಡಲವು ಅಪವಿತ್ರವಾಗುತ್ತದೆ: ‘ಜೀರ್ಣ’ ಎಂದರೆ ಅತ್ಯಂತ ಹಳೆಯ. ಕಾಲಕಳೆದಂತೆ ಇಂತಹ ದೇವಾಲಯಗಳ ಸ್ಥಳಗಳಲ್ಲಿ ಅಲ್ಲಿನ ದೇವತೆಗಳ ಶಕ್ತಿರೂಪೀ ವಾಯುಮಂಡಲವು ಭೂಮಂಡಲದೊಂದಿಗೆ ಘನೀಕೃತವಾಗಿರುತ್ತದೆ. ಜೀರ್ಣ ದೇವಸ್ಥಾನಗಳ ಭಗ್ನ ಅವಶೇಷಗಳಿಂದ ವಾಯುಮಂಡಲದಲ್ಲಿ ಹೊರಬೀಳುವ ದೇವತೆಯ ಚೇತನವು ಕಡಿಮೆಯಾಗಿದ್ದರೂ ಆ ದೇವತೆಯ ಪೃಥ್ವಿ ಮತ್ತು ಆಪತತ್ತ್ವಗಳೊಂದಿಗೆ ಸಂಬಂಧಿಸಿದ ಶಕ್ತಿಸ್ವರೂಪ ವಾಯುಮಂಡಲವು ಭೂಮಂಡಲದೊಂದಿಗೆ ಘನೀಕೃತವಾಗಿ ಸುಪ್ತ ರೂಪದಲ್ಲಿ ಇರುವುದರಿಂದ ಅದು ಒಂದು ಪವಿತ್ರ ವಾಯುಮಂಡಲವೇ ಆಗಿರುತ್ತದೆ. ಇಂತಹ ಪವಿತ್ರ ಸ್ಥಳದಲ್ಲಿ ರಜ-ತಮಾತ್ಮಕ ಲಹರಿಗಳ ಮತ್ತು ವಾಯುಗಳ ಹರಡುವಿಕೆಗೆ ಕಾರಣವಾಗುವ ಮಲಮೂತ್ರ ವಿಸರ್ಜನೆಯಂತಹ ಕೃತಿಗಳನ್ನು ಮಾಡುವುದರಿಂದ ಆ ಸ್ಥಳದಲ್ಲಿರುವ ಪವಿತ್ರ ವಾಯುಮಂಡಲವು ಅಪವಿತ್ರವಾಗುತ್ತದೆ ಮತ್ತು ಇದು ಒಂದು ಪಾಪಭರಿತ ಕರ್ಮವಾಗುತ್ತದೆ.
ಟಿಪ್ಪಣಿ : ಜೀರ್ಣ ದೇವಸ್ಥಾನಗಳ ಬಳಿ ಅಷ್ಟೇ ಅಲ್ಲದೇ, ದೇವಸ್ಥಾನದ ಸುತ್ತಮುತ್ತಲಿನ ಜಾಗದಲ್ಲಿ ಮಲಮೂತ್ರ ವಿಸರ್ಜನೆ ಮಾಡುವುದು ಪಾಪಕರ್ಮವೇ ಆಗಿದೆ.
(ಹೆಚ್ಚಿನ ಮಾಹಿತಿಗಾಗಿ ಓದಿರಿ ಸನಾತನ ಸಂಸ್ಥೆ ನಿರ್ಮಿಸಿದ ಗ್ರಂಥ ‘ದಿನಚರಿಗೆ ಸಂಬಂಧಿಸಿದ ಆಚಾರಗಳು ಮತ್ತು ಅವುಗಳ ಹಿಂದಿನ ಶಾಸ್ತ್ರ)
ಧಾರ್ಮಿಕ ಕೃತಿಗಳ ಆರಂಭದಲ್ಲಿ ಮಾಡಿದ ಸಂಕಲ್ಪ ಮತ್ತು ಕೊನೆಗೆ ಅದರಿಂದ ಸಿಗುವ ಫಲವನ್ನು ಈಶ್ವರನಿಗೆ ಅರ್ಪಿಸುವುದರ ಮಹತ್ವ
ಧಾರ್ಮಿಕ ಕೃತಿಗಳನ್ನು ಮಾಡುವಾಗ ಸಾಮಾನ್ಯವಾಗಿ ಪಾಲಿಸಬೇಕಾದ ನಿಯಮಗಳು !
ಮೃತ ವ್ಯಕ್ತಿಯು ಬಳಸಿದ ವಸ್ತುಗಳನ್ನು ದಾನ ಮಾಡಬಹುದೇ?
ಮೃತ್ಯುನಂತರದ ಕ್ರಿಯಾಕರ್ಮಗಳು (13 ನೇ ದಿನದ ಕರ್ಮಗಳ ವರೆಗೆ)
ಮೃತ್ಯುನಂತರದ ಕ್ರಿಯಾಕರ್ಮಗಳು (ಅಂತ್ಯಯಾತ್ರೆಯ ಸಿದ್ಧತೆ ವರೆಗೆ)
ಪಿತೃಲೋಕದ ವ್ಯಾಖ್ಯೆ ಮತ್ತು ಅದರ ವಿಧಗಳು