ಮಣೆಯ ಸುತ್ತಲೂ ಅಥವಾ ಚೌರಂಗದ ಕೆಳಗೆ ರಂಗೋಲಿಯನ್ನು ಬಿಡಿಸುವುದರ ಮತ್ತು ಅದರ ಮೇಲೆ ಅರಿಶಿನ-ಕುಂಕುಮವನ್ನು ಹಾಕುವುದರ ಮಹತ್ವ: ‘ಯಾವುದೇ ಪೂಜಾವಿಧಿಯನ್ನು ಮಾಡುವಾಗ ಮೊದಲು ಮಣೆಯ ಸುತ್ತಲೂ ಅಥವಾ ಚೌರಂಗದ ಕೆಳಗೆ ಸಾತ್ತ್ವಿಕ ಆಕಾರದ ರಂಗೋಲಿಯನ್ನು ಬಿಡಿಸುವುದರಿಂದ, ಈ ಆಕಾರದಿಂದ ವೇಗವಾಗಿ ಪ್ರಕ್ಷೇಪಿಸುವ ಲಹರಿಗಳ ಕವಚವು ಮಣೆಯ ಸುತ್ತಲೂ ಅಥವಾ ಚೌರಂಗದ ಸುತ್ತಲೂ ನಿರ್ಮಾಣವಾಗಲು ಸಹಾಯವಾಗುತ್ತದೆ. ರಂಗೋಲಿಯಿಂದ ಪ್ರಕ್ಷೇಪಿತವಾಗುವ ವೇಗವಾದ ಲಹರಿಗಳ ಕಡೆಗೆ ಮತ್ತು ರಂಗೋಲಿಯ ಆಕೃತಿಯಲ್ಲಿ ಭೂಮಿಲಹರಿಗಳು ಆಕರ್ಷಿತವಾಗಿ ಅವು ಅಲ್ಲಿ ಬಂಧಿಸಲ್ಪಡುತ್ತವೆ. ರಂಗೋಲಿಯ ರೇಖೆಗಳಿಂದ ಆವಶ್ಯಕತೆಗನುಸಾರ ಸಾತ್ತ್ವಿಕ ಲಹರಿಗಳು ಜೀವದ ಕಡೆಗೆ ಪ್ರಕ್ಷೇಪಿತವಾಗುತ್ತವೆ ಹಾಗೂ ಭೂಮಿಯ ಮೇಲೆ ಈ ಲಹರಿಗಳ ಸೂಕ್ಷ್ಮ ಹೊದಿಕೆಯು ನಿರ್ಮಾಣವಾಗಲು ಸಹಾಯವಾಗುವುದರಿಂದ ಪಾತಾಳದಲ್ಲಿನ ಅಥವಾ ವಾಸ್ತುವಿನಲ್ಲಿನ ಕೆಟ್ಟ ಶಕ್ತಿಗಳಿಂದ ಪ್ರಕ್ಷೇಪಿತವಾಗುವ ಕಪ್ಪು ಶಕ್ತಿಯ ಲಹರಿಗಳಿಂದ ಜೀವದ ರಕ್ಷಣೆಯಾಗಲು ಸಹಾಯವಾಗುತ್ತದೆ. ರಂಗೋಲಿಯ ಬೇರೆಬೇರೆ ಆಕೃತಿಯಂತೆ, ಆಯಾ ಆಕೃತಿಯಲ್ಲಿ ಸಂಗ್ರಹವಾದ ವಿಶಿಷ್ಟ ದೇವತೆಗಳ ಲಹರಿಗಳಿಂದಾಗಿ ಕೆಟ್ಟ ಶಕ್ತಿಗಳು ರಂಗೋಲಿಯನ್ನು ನೋಡಿ ಹೆದರುತ್ತವೆ. ರಂಗೋಲಿಯನ್ನು ಬಿಡಿಸಿದ ನಂತರ ರಂಗೋಲಿಯ ಕೇಂದ್ರಬಿಂದುವಿನ ಮೇಲೆ ಅರಿಶಿನ-ಕುಂಕುಮವನ್ನು ಹಾಕುವುದರಿಂದ ಅರಿಶಿನ-ಕುಂಕುಮದಿಂದ ಪ್ರಕ್ಷೇಪಿತವಾಗುವ ತೇಜತತ್ತ್ವಕ್ಕೆ ಸಂಬಂಧಿಸಿದ ಬಣ್ಣದ ಕಣಗಳೆಡೆಗೆ ಬ್ರಹ್ಮಾಂಡದಲ್ಲಿನ ಉಚ್ಚ ದೇವತೆಗಳ ಲಹರಿಗಳು ಕೂಡಲೇ ಆಕರ್ಷಿಸುತ್ತವೆ. ಇದರಿಂದ ರಂಗೋಲಿಯಿಂದ ಪ್ರಕ್ಷೇಪಿತವಾಗುವ ಲಹರಿಗಳ ಕಾರ್ಯಕ್ಷಮತೆ, ವೇಗ ಮತ್ತು ಪರಿಣಾಮಕಾರಕತೆಯೂ ಹೆಚ್ಚುತ್ತದೆ. ಆದುದರಿಂದ ಯಾವುದೇ ಶುಭವಿಧಿಯಲ್ಲಿ ಕೆಟ್ಟ ಶಕ್ತಿಗಳ ಅಡಚಣೆಗಳು ಬರಬಾರದೆಂದು ಬಾಗಿಲಿನ ಮುಂದೆ, ಪೂಜಾವಿಧಿಯ ಎದುರಿಗೆ ಅಥವಾ ಮಣೆಯ ಸುತ್ತಲೂ ರಂಗೋಲಿಯನ್ನು ಬಿಡಿಸುತ್ತಾರೆ.’ – ಓರ್ವ ವಿದ್ವಾಂಸ (ಸೌ.ಅಂಜಲಿ ಗಾಡಗೀಳರ ಮಾಧ್ಯಮದಿಂದ, ೨೧.೧೧.೨೦೦೪, ಸಾಯಂಕಾಲ ೬.೩೭)
(ಆಧಾರ : ಸನಾತನ ಸಂಸ್ಥೆಯ ಗ್ರಂಥ ‘ಪೂಜಾ ಸಾಮಗ್ರಿಗಳ ಮಹತ್ವ’)
ಧಾರ್ಮಿಕ ಕೃತಿಗಳ ಆರಂಭದಲ್ಲಿ ಮಾಡಿದ ಸಂಕಲ್ಪ ಮತ್ತು ಕೊನೆಗೆ ಅದರಿಂದ ಸಿಗುವ ಫಲವನ್ನು ಈಶ್ವರನಿಗೆ ಅರ್ಪಿಸುವುದರ ಮಹತ್ವ
ಧಾರ್ಮಿಕ ಕೃತಿಗಳನ್ನು ಮಾಡುವಾಗ ಸಾಮಾನ್ಯವಾಗಿ ಪಾಲಿಸಬೇಕಾದ ನಿಯಮಗಳು !
ಮೃತ ವ್ಯಕ್ತಿಯು ಬಳಸಿದ ವಸ್ತುಗಳನ್ನು ದಾನ ಮಾಡಬಹುದೇ?
ಮೃತ್ಯುನಂತರದ ಕ್ರಿಯಾಕರ್ಮಗಳು (13 ನೇ ದಿನದ ಕರ್ಮಗಳ ವರೆಗೆ)
ಮೃತ್ಯುನಂತರದ ಕ್ರಿಯಾಕರ್ಮಗಳು (ಅಂತ್ಯಯಾತ್ರೆಯ ಸಿದ್ಧತೆ ವರೆಗೆ)
ಪಿತೃಲೋಕದ ವ್ಯಾಖ್ಯೆ ಮತ್ತು ಅದರ ವಿಧಗಳು
Nice