ಮಣೆಯ ಸುತ್ತಲೂ ಅಥವಾ ಚೌರಂಗದ ಕೆಳಗೆ ರಂಗೋಲಿಯನ್ನು ಬಿಡಿಸುವುದರ ಮತ್ತು ಅದರ ಮೇಲೆ ಅರಿಶಿನ-ಕುಂಕುಮವನ್ನು ಹಾಕುವುದರ ಮಹತ್ವ: ‘ಯಾವುದೇ ಪೂಜಾವಿಧಿಯನ್ನು ಮಾಡುವಾಗ ಮೊದಲು ಮಣೆಯ ಸುತ್ತಲೂ ಅಥವಾ ಚೌರಂಗದ ಕೆಳಗೆ ಸಾತ್ತ್ವಿಕ ಆಕಾರದ ರಂಗೋಲಿಯನ್ನು ಬಿಡಿಸುವುದರಿಂದ, ಈ ಆಕಾರದಿಂದ ವೇಗವಾಗಿ ಪ್ರಕ್ಷೇಪಿಸುವ ಲಹರಿಗಳ ಕವಚವು ಮಣೆಯ ಸುತ್ತಲೂ ಅಥವಾ ಚೌರಂಗದ ಸುತ್ತಲೂ ನಿರ್ಮಾಣವಾಗಲು ಸಹಾಯವಾಗುತ್ತದೆ. ರಂಗೋಲಿಯಿಂದ ಪ್ರಕ್ಷೇಪಿತವಾಗುವ ವೇಗವಾದ ಲಹರಿಗಳ ಕಡೆಗೆ ಮತ್ತು ರಂಗೋಲಿಯ ಆಕೃತಿಯಲ್ಲಿ ಭೂಮಿಲಹರಿಗಳು ಆಕರ್ಷಿತವಾಗಿ ಅವು ಅಲ್ಲಿ ಬಂಧಿಸಲ್ಪಡುತ್ತವೆ. ರಂಗೋಲಿಯ ರೇಖೆಗಳಿಂದ ಆವಶ್ಯಕತೆಗನುಸಾರ ಸಾತ್ತ್ವಿಕ ಲಹರಿಗಳು ಜೀವದ ಕಡೆಗೆ ಪ್ರಕ್ಷೇಪಿತವಾಗುತ್ತವೆ ಹಾಗೂ ಭೂಮಿಯ ಮೇಲೆ ಈ ಲಹರಿಗಳ ಸೂಕ್ಷ್ಮ ಹೊದಿಕೆಯು ನಿರ್ಮಾಣವಾಗಲು ಸಹಾಯವಾಗುವುದರಿಂದ ಪಾತಾಳದಲ್ಲಿನ ಅಥವಾ ವಾಸ್ತುವಿನಲ್ಲಿನ ಕೆಟ್ಟ ಶಕ್ತಿಗಳಿಂದ ಪ್ರಕ್ಷೇಪಿತವಾಗುವ ಕಪ್ಪು ಶಕ್ತಿಯ ಲಹರಿಗಳಿಂದ ಜೀವದ ರಕ್ಷಣೆಯಾಗಲು ಸಹಾಯವಾಗುತ್ತದೆ. ರಂಗೋಲಿಯ ಬೇರೆಬೇರೆ ಆಕೃತಿಯಂತೆ, ಆಯಾ ಆಕೃತಿಯಲ್ಲಿ ಸಂಗ್ರಹವಾದ ವಿಶಿಷ್ಟ ದೇವತೆಗಳ ಲಹರಿಗಳಿಂದಾಗಿ ಕೆಟ್ಟ ಶಕ್ತಿಗಳು ರಂಗೋಲಿಯನ್ನು ನೋಡಿ ಹೆದರುತ್ತವೆ. ರಂಗೋಲಿಯನ್ನು ಬಿಡಿಸಿದ ನಂತರ ರಂಗೋಲಿಯ ಕೇಂದ್ರಬಿಂದುವಿನ ಮೇಲೆ ಅರಿಶಿನ-ಕುಂಕುಮವನ್ನು ಹಾಕುವುದರಿಂದ ಅರಿಶಿನ-ಕುಂಕುಮದಿಂದ ಪ್ರಕ್ಷೇಪಿತವಾಗುವ ತೇಜತತ್ತ್ವಕ್ಕೆ ಸಂಬಂಧಿಸಿದ ಬಣ್ಣದ ಕಣಗಳೆಡೆಗೆ ಬ್ರಹ್ಮಾಂಡದಲ್ಲಿನ ಉಚ್ಚ ದೇವತೆಗಳ ಲಹರಿಗಳು ಕೂಡಲೇ ಆಕರ್ಷಿಸುತ್ತವೆ. ಇದರಿಂದ ರಂಗೋಲಿಯಿಂದ ಪ್ರಕ್ಷೇಪಿತವಾಗುವ ಲಹರಿಗಳ ಕಾರ್ಯಕ್ಷಮತೆ, ವೇಗ ಮತ್ತು ಪರಿಣಾಮಕಾರಕತೆಯೂ ಹೆಚ್ಚುತ್ತದೆ. ಆದುದರಿಂದ ಯಾವುದೇ ಶುಭವಿಧಿಯಲ್ಲಿ ಕೆಟ್ಟ ಶಕ್ತಿಗಳ ಅಡಚಣೆಗಳು ಬರಬಾರದೆಂದು ಬಾಗಿಲಿನ ಮುಂದೆ, ಪೂಜಾವಿಧಿಯ ಎದುರಿಗೆ ಅಥವಾ ಮಣೆಯ ಸುತ್ತಲೂ ರಂಗೋಲಿಯನ್ನು ಬಿಡಿಸುತ್ತಾರೆ.’ – ಓರ್ವ ವಿದ್ವಾಂಸ (ಸೌ.ಅಂಜಲಿ ಗಾಡಗೀಳರ ಮಾಧ್ಯಮದಿಂದ, ೨೧.೧೧.೨೦೦೪, ಸಾಯಂಕಾಲ ೬.೩೭) (ಆಧಾರ : ಸನಾತನ ಸಂಸ್ಥೆಯ ಗ್ರಂಥ ‘ಪೂಜಾ ಸಾಮಗ್ರಿಗಳ ಮಹತ್ವ’)
ಸನಾತನ ಸಂಸ್ಥೆಯನ್ನು ‘ಭಯೋತ್ಪಾದಕ’ ಎಂದು ಕರೆದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚವ್ಹಾಣ್ ರಿಗೆ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ...
“ಸತ್ಯದ ವಿಜಯ”, ಷಡ್ಯಂತ್ರಕಾರಿ ಶಕ್ತಿಗಳಿಗೆ ಶಿಕ್ಷೆಯಾದಗಲೇ ನ್ಯಾಯ ಸಿಗಲಿದೆ ! – ಸನಾತನ ಸಂಸ್ಥೆಯ ನಿಲುವು
ಆದರ್ಶ ಗುರುಸೇವೆಯ ಆದರ್ಶ ಉದಾಹರಣೆ – ಪ.ಪೂ. ರಾಮಾನಂದ ಮಹಾರಾಜರು !
ಸಾಧಕರ ಮನೆಯ ರಕ್ಷಣೆಯಾಗಲು ಸಪ್ತರ್ಷಿಗಳು ಮಾಡಲು ಹೇಳಿರುವ ಉಪಾಯ !
ಸನಾತನದ ೧೭ ನೇ ಸಮಷ್ಟಿ ಸಂತರಾದ ಪೂ. ಕೆ. ಉಮೇಶ ಶೆಣೈ (ವ. ೬೮) ಇವರ ಸಾಧನೆಯ ಪ್ರವಾಸ !
‘ಸನಾತನ ಪಂಚಾಂಗ’ದ ಆಂಡ್ರಾಯ್ಡ್ ಮತ್ತು iOS ಆವೃತ್ತಿ
Very good information to learning