೧. ಮನೆಯಲ್ಲಿರುವ ಮೂರ್ತಿ ಭಗ್ನವಾಗಿದ್ದರೆ : ಮೂರ್ತಿಯು ಬಿದ್ದು ಭಗ್ನವಾದರೆ ಅದು ಅಪಶಕುನವೆಂದು ತಿಳಿಯಲಾಗುತ್ತದೆ. ದೇವತೆಯ ಮುಕುಟ ಬಿದ್ದರೆ, ಅದೂ ಒಂದು ಅಪಶಕುನವಾಗುತ್ತದೆ. ಅದು, ಮುಂಬರುವ ಸಂಕಟದ ಮುನ್ಸೂಚನೆ ಇರಬಹುದು. ಇಂತಹ ಸಮಯದಲ್ಲಿ ಆ ಮೂರ್ತಿಯನ್ನು ಹರಿಯುವ ನೀರಿನಲ್ಲಿ ವಿಸರ್ಜನೆ ಮಾಡಿ ಹೊಸದಾದ ಮೂರ್ತಿಯ ಪ್ರಾಣಪ್ರತಿಷ್ಠಾಪನೆ ಮಾಡಬೇಕು.
೨. ದೇವಸ್ಥಾನದಲ್ಲಿರುವ ಮೂರ್ತಿ
ಮೂರ್ತಿಗಳಲ್ಲಿ ಸ್ಥಿರ ಮತ್ತು ಚಲ ಹೀಗೆ ಎರಡು ವಿಧಗಳಿವೆ.
೨ ಅ. ಸ್ಥಿರ ಮೂರ್ತಿ : ಈ ಮೂರ್ತಿಯನ್ನು ದೇವಸ್ಥಾನದಲ್ಲಿ ಶಾಶ್ವತವಾಗಿ ಕುಳ್ಳಿರಿಸಿರುವುದರಿಂದ ಅದು ಎಂದೂ ಅಲಗಾಡಿಸಲು ಬರುವುದಿಲ್ಲ. ಆದ್ದರಿಂದ ಅದು ಬೀಳುವ ಪ್ರಶ್ನೆಯೇ ಬರುವುದಿಲ್ಲ; ಯಾವಾಗ ಮೂರ್ತಿಯು ಬೀಳುತ್ತದೆಯೋ ಆಗ ಅದು ಒಂದೋ ಭಗ್ನವಾಗಿರುವುದರಿಂದ ಅಥವಾ ಅದು ಸವಿದಿರುವುದರಿಂದಲೂ ಬೀಳುತ್ತದೆ. ಅಂತಹ ಸಮಯದಲ್ಲಿ ಆ ಮೂರ್ತಿಯನ್ನು ಹರಿಯುವ ನೀರಿನಲ್ಲಿ ವಿಸರ್ಜನೆ ಮಾಡಿ ಹೊಸ ಮೂರ್ತಿಯ ಪ್ರಾಣಪ್ರತಿಷ್ಠಾಪನೆ ಮಾಡಬೇಕು.
೨ ಆ. ಚಲ ಮೂರ್ತಿ : ಇದು ದೇವಸ್ಥಾನದಲ್ಲಿ ಉತ್ಸವಮೂರ್ತಿ ಆಗಿರುವುದರಿಂದ ಅದನ್ನು ಅಲುಗಾಡಿಸಬಹುದು. ಆ ಮೂರ್ತಿಯು ಭಗ್ನವಾಗದೇ ಕೇವಲ ಬಿದ್ದಿದ್ದರೆ ಆಗ ಮೇಲಿನ ಅಂಶ ೧ ಅ. ದರಲ್ಲಿ ಹೇಳಿದಂತೆ ವಿಧಿ ಮಾಡಬೇಕು. ಅನಂತರ ಆ ಮೂರ್ತಿಯನ್ನು ಮೊದಲಿನ ಹಾಗೆ ಪುನಃ ಪೂಜೆಯಲ್ಲಿ ಇಡಬಹುದು; ಆದರೆ ಮೂರ್ತಿಯು ಭಗ್ನವಾದಲ್ಲಿ ಮಾತ್ರ ಅದು ಹರಿಯುವ ನೀರಿನಲ್ಲಿ ವಿಸರ್ಜನೆ ಮಾಡಿ ಹೊಸದಾದ ಮೂರ್ತಿಯ ಪ್ರಾಣಪ್ರತಿಷ್ಠಾಪನೆ ಮಾಡಬೇಕು.’
೩. ಮನೆ ಮತ್ತು ದೇವಸ್ಥಾನದಲ್ಲಿರುವ ಭಗ್ನ ಮೂರ್ತಿಯ ಪ್ರಾಣಪ್ರತಿಷ್ಠಾಪನೆಯ ಸಂದರ್ಭದಲ್ಲಿ ಸಮಾನ ಅಂಶಗಳು
ಮೂರ್ತಿ ಭಗ್ನ ಆಗುವುದು, ಇದು ಮುಂಬರುವ ಸಂಕಟದ ಸೂಚನೆ ಆಗಿರುತ್ತದೆ. ಆದ್ದರಿಂದ ಮನೆ ಮತ್ತು ದೇವಸ್ಥಾನದಲ್ಲಿರುವ ಭಗ್ನ ಮೂರ್ತಿಯ ವಿಸರ್ಜನೆ ಮಾಡಿ ಹೊಸ ಮೂರ್ತಿಯ ಪ್ರಾಣಪ್ರತಿಷ್ಠಾಪನೆ ಮಾಡುವ ಮೊದಲು ಅಘೋರ ಹೋಮ, ತತ್ತ್ವೋತ್ತಾರಣ ವಿಧಿ (ಭಗ್ನಮೂರ್ತಿಯಲ್ಲಿರುವ ದೇವತೆಯ ತತ್ತ್ವವನ್ನು ತೆಗೆದು ಅದು ಹೊಸದಾದ ಮೂರ್ತಿಯಲ್ಲಿ ಪ್ರತಿಷ್ಠಾಪಿಸುವುದು) ಹೀಗೆ ಮುಂತಾದ ವಿಧಿ ಮಾಡಲು ಶಾಸ್ತ್ರದಲ್ಲಿ ಹೇಳಲಾಗಿದೆ. ಈ ವಿಧಿಗಳಿಂದ ಅನಿಷ್ಟಗಳ ನಿವಾರಣೆ ಯಾಗಿ ಶಾಂತಿ ಸಿಗುತ್ತದೆ. ಕೇವಲ ವ್ಯತ್ಯಾಸವಿಷ್ಟೇ, ಮನೆಯಲ್ಲಿ ಈ ವಿಧಿಗಳ ಪ್ರಮಾಣ ಅಲ್ಪಸ್ವರೂಪದಲ್ಲಿರುತ್ತದೆ ಮತ್ತು ದೇವಸ್ಥಾನದಲ್ಲಿ ದೊಡ್ಡಪ್ರಮಾಣದಲ್ಲಿ ಶಾಸ್ತ್ರೋಕ್ತ ಪದ್ಧತಿಯಿಂದ ಈ ವಿಧಿ ಮಾಡಬೇಕಾಗುತ್ತದೆ.’
– ವೇದಮೂರ್ತಿ ಶ್ರೀ. ಕೇತನ ರವಿಕಾಂತ ಶಹಾಣೆ, ಅಧ್ಯಾಪಕರು, ಸನಾತನ ಪುರೋಹಿತ ಪಾಠಶಾಲೆ, ಸನಾತನ ಆಶ್ರಮ, ರಾಮನಾಥಿ, ಗೋವಾ.
ವಿಜಯದಶಮಿ ನಿಮಿತ್ತ ಪರಾತ್ಪರ ಗುರು ಡಾ. ಆಠವಲೆಯವರ ಸಂದೇಶ
ವಿಜಯ ದಶಮಿ ನಿಮಿತ್ತ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಸಂದೇಶ
ನಾಮಜಪದ ಹೆಚ್ಚೆಚ್ಚು ಲಾಭವಾಗಲೆಂದು ಭಾವಪೂರ್ಣ ಧ್ವನಿಮುದ್ರಣವನ್ನು ಮಾಡಿಸಿಕೊಳ್ಳುವ ಮತ್ತು ಅದನ್ನು ಎಲ್ಲರಿಗೂ ಒದಗಿಸುವ ಪರಾತ್ಪರ ಗುರು ಡಾ. ಆಠವಲೆ !
ಕಾಲಾನುಸಾರ ಆವಶ್ಯಕವಾಗಿರುವ ಸಪ್ತದೇವತೆಗಳ ನಾಮಜಪಗಳು
ಶ್ರೀ ಗಣಪತಿಯ ನಾಮಜಪಗಳು
ಶ್ರೀಕೃಷ್ಣನ ನಾಮಜಪ