ಜ್ಯೋತಿರ್ಲಿಂಗಗಳು

ಭಾರತದಲ್ಲಿನ ಪ್ರಮುಖ ಶಿವಸ್ಥಾನ ಗಳೆಂದರೆ ಹನ್ನೆರಡು ಜ್ಯೋತಿರ್ಲಿಂಗಗಳು. ಅವು ತೇಜಸ್ವಿ ರೂಪದಲ್ಲಿ ಉತ್ಪನ್ನವಾದವು. ಹದಿಮೂರನೆಯ ಪಿಂಡಕ್ಕೆ ಕಾಲಪಿಂಡವೆನ್ನುತ್ತಾರೆ. ಕಾಲದ ಆಚೆಗೆ ಹೋಗಿರುವ ಪಿಂಡವೆಂದರೆ (ದೇಹವೆಂದರೆ) ಕಾಲಪಿಂಡ. ಹನ್ನೆರಡು ಜ್ಯೋತಿರ್ಲಿಂಗಗಳು ಮುಂದಿನಂತಿವೆ.

ಹನ್ನೆರಡು ಜ್ಯೋತಿರ್ಲಿಂಗಗಳು ಶರೀರವಾಗಿದ್ದು ಕಾಠಮಾಂಡು (ನೇಪಾಳ) ದಲ್ಲಿರುವ ಪಶುಪತಿನಾಥ ಜ್ಯೋತಿರ್ಲಿಂಗವು ತಲೆಯಾಗಿದೆ.

ಜ್ಯೋತಿರ್ಲಿಂಗ ಮತ್ತು ಸಂತರ ಸಮಾಧಿಸ್ಥಳಗಳ ಮಹತ್ವ

ಸಂತರು ಸಮಾಧಿಯನ್ನು ಸ್ವೀಕರಿಸಿದ ನಂತರ ಅವರ ಕಾರ್ಯವು ಹೆಚ್ಚು ಪ್ರಮಾಣದಲ್ಲಿ ಸೂಕ್ಷ್ಮದಲ್ಲಿ ನಡೆಯುತ್ತದೆ. ಸಂತರು ದೇಹತ್ಯಾಗ ಮಾಡಿದ ನಂತರ ಅವರ ದೇಹದಿಂದ ಪ್ರಕ್ಷೇಪಿತವಾಗುವ ಚೈತನ್ಯಲಹರಿ ಮತ್ತು ಸಾತ್ತ್ವಿಕ ಲಹರಿಗಳ ಪ್ರಮಾಣವು ಹೆಚ್ಚಿರುತ್ತದೆ. ಹೇಗೆ ಸಂತರ ಸಮಾಧಿಯು ಭೂಮಿಯ ಕೆಳಗಿರುತ್ತದೆಯೋ, ಹಾಗೆಯೇ ಜ್ಯೋತಿರ್ಲಿಂಗಗಳು ಮತ್ತು ಸ್ವಯಂಭೂ ಶಿವಲಿಂಗಗಳು ಭೂಮಿಯ ಕೆಳಗಿರುತ್ತವೆ. ಈ ಶಿವಲಿಂಗಗಳಲ್ಲಿ ಇತರ ಶಿವಲಿಂಗಗಳ ತುಲನೆಯಲ್ಲಿ ನಿರ್ಗುಣ ತತ್ತ್ವದ ಪ್ರಮಾಣವು ಹೆಚ್ಚಿರುವುದರಿಂದ ಅವುಗಳಿಂದ ಚೈತನ್ಯ ಮತ್ತು ಸಾತ್ತ್ವಿಕತೆಯು ಹೆಚ್ಚು ಪ್ರಮಾಣದಲ್ಲಿ ಮತ್ತು ಸತತವಾಗಿ ಪ್ರಕ್ಷೇಪಿಸುತ್ತಿರುತ್ತದೆ. ಇದರಿಂದ ಪೃಥ್ವಿಯ ಮೇಲಿನ ವಾತಾವರಣವು ಸತತವಾಗಿ ಶುದ್ಧವಾಗುತ್ತಿರುತ್ತದೆ, ಅದರೊಂದಿಗೆ ಜ್ಯೋತಿರ್ಲಿಂಗ ಮತ್ತು ಸಂತರ ಸಮಾಧಿಸ್ಥಳಗಳಿಂದ ಪಾತಾಳದ ದಿಕ್ಕಿನಲ್ಲಿಯೂ ಸತತವಾಗಿ ಚೈತನ್ಯ ಮತ್ತು ಸಾತ್ತ್ವಿಕತೆಯ ಪ್ರಕ್ಷೇಪಣೆಯಾಗಿ ಪಾತಾಳ ದಲ್ಲಿರುವ ಕೆಟ್ಟ ಶಕ್ತಿಗಳೊಂದಿಗೆ ಅವರ ಯುದ್ಧವು ಸತತವಾಗಿ ನಡೆಯುತ್ತಿರುತ್ತದೆ. ಇದರಿಂದ ಪಾತಾಳದಲ್ಲಿನ ಶಕ್ತಿಶಾಲಿ ಕೆಟ್ಟ ಶಕ್ತಿಗಳ ಹಲ್ಲೆಯಿಂದ ಭೂಲೋಕದ ರಕ್ಷಣೆಯಾಗುತ್ತದೆ.

ವೈಶಿಷ್ಟ್ಯಗಳು

ರುದ್ರಾಕ್ಷದ ಮಂತ್ರಸಿದ್ಧಿಗಾಗಿ ಗುಣ ಹಾಗೂ ಶಕ್ತಿಗೆ ತಕ್ಕಂತೆ ಯೋಗ್ಯ ಗುಣಗಳುಳ್ಳ ಜ್ಯೋತಿರ್ಲಿಂಗವನ್ನು ಆರಿಸಿಕೊಂಡು ಆ ಜ್ಯೋತಿರ್ಲಿಂಗಕ್ಕೆ ಅಭಿಷೇಕ ಮಾಡಬೇಕು. ಉದಾಹರಣೆಗೆ ಮಹಾಕಾಳನು ತಾಮಸಶಕ್ತಿಯಿಂದ ಯುಕ್ತನಾಗಿದ್ದಾನೆ, ನಾಗನಾಥನು ಹರಿಹರ ಸ್ವರೂಪನಾಗಿದ್ದು ಸತ್ತ್ವ ಹಾಗೂ ತಮೋಗುಣ ಪ್ರಧಾನನಾಗಿದ್ದಾನೆ, ತ್ರ್ಯಂಬಕೇಶ್ವರನು ತ್ರಿಗುಣಾತ್ಮಕ (ಅವಧೂತ) ನಾಗಿದ್ದಾನೆ ಮತ್ತು ಸೋಮನಾಥನು ರೋಗಮುಕ್ತಿಗಾಗಿ ಯೋಗ್ಯನಾಗಿದ್ದಾನೆ.

ಜ್ಯೋತಿರ್ಲಿಂಗದ ಅರ್ಥ

೧. ವ್ಯಾಪಕ ಬ್ರಹ್ಮಾತ್ಮಲಿಂಗ ಅಥವಾ ವ್ಯಾಪಕ ಪ್ರಕಾಶ
೨. ತೈತ್ತಿರೀಯ ಉಪನಿಷತ್ತಿನಲ್ಲಿ ಬ್ರಹ್ಮ, ಮಾಯೆ, ಜೀವ, ಮನಸ್ಸು, ಬುದ್ಧಿ, ಚಿತ್ತ, ಅಹಂಕಾರ ಮತ್ತು ಪಂಚಮಹಾಭೂತಗಳು ಎಂಬ ಹನ್ನೆರಡು ತತ್ತ್ವಗಳನ್ನು ಹನ್ನೆರಡು ಜ್ಯೋತಿರ್ಲಿಂಗಗಳೆಂದು ಕರೆಯಲಾಗಿದೆ.
೩. ಶಿವಲಿಂಗದ ಹನ್ನೆರಡು ಖಂಡಗಳು
೪. ಪಾಣಿಪೀಠವು ಯಜ್ಞವೇದಿಕೆಯ ಮತ್ತು ಲಿಂಗವು ಯಜ್ಞದ ಪ್ರತೀಕವಾಗಿರುವ ಜ್ಯೋತಿಯ, ಅಂದರೆ ಯಜ್ಞಶಿಖೆಯ ಪ್ರತೀಕವಾಗಿದೆ.
೫. ದ್ವಾದಶ ಆದಿತ್ಯರ ಪ್ರತೀಕಗಳು
೬. ಸುಪ್ತಾವಸ್ಥೆಯಲ್ಲಿರುವ ಜ್ವಾಲಾಮುಖಿಯ ಉದ್ರೇಕ ಸ್ಥಾನಗಳು

ದಕ್ಷಿಣ ದಿಕ್ಕಿನ ಸ್ವಾಮಿಯಾದ ಯಮನು ಶಂಕರನ ಅಧಿಪತ್ಯದಲ್ಲಿರುವುದರಿಂದ ದಕ್ಷಿಣ ದಿಕ್ಕು ಶಂಕರನ ದಿಕ್ಕಾಗುತ್ತದೆ. ಜ್ಯೋತಿರ್ಲಿಂಗಗಳು ದಕ್ಷಿಣಾಭಿಮುಖಿಯಾಗಿರುತ್ತವೆ, ಅಂದರೆ ಜ್ಯೋತಿರ್ಲಿಂಗಗಳ ಪಾಣಿಪೀಠದ ಹರಿನಾಳವು ದಕ್ಷಿಣ ದಿಕ್ಕಿಗಿರುತ್ತದೆ. ಬಹುತೇಕ ಮಂದಿರಗಳು ದಕ್ಷಿಣಾಭಿಮುಖವಾಗಿರುವುದಿಲ್ಲ. ಪಾಣಿಪೀಠವು ದಕ್ಷಿಣಾಭಿಮುಖವಾಗಿದ್ದರೆ ಆ ಲಿಂಗವು ಹೆಚ್ಚು ಶಕ್ತಿಶಾಲಿಯಾಗಿರುತ್ತದೆ. ಹರಿನಾಳವು ಉತ್ತರ ದಿಕ್ಕಿಗಿದ್ದರೆ ಆ ಲಿಂಗವು ಕಡಿಮೆ ಶಕ್ತಿಶಾಲಿಯಾಗಿರುತ್ತದೆ.

(ಸನಾತನ ಸಂಸ್ಥೆಯ “ಶಿವ” ಗ್ರಂಥವನ್ನು ಓದಿರಿ.)

3 thoughts on “ಜ್ಯೋತಿರ್ಲಿಂಗಗಳು”

  1. Namaskar,
    Can we install idols in the form of Krishna/Dattatreya/Shiva or Moreshwar or any other style?
    What would be the Sattva predominance of an idol in the above style?
    How are the vibrations measured? How do we identify the most sattva predominant idol?

    Dhanyawaad,
    Naveen Chander (Bhagyanagar)

    Reply
    • Namaskar Naveenji,

      Yes, we can install idols of Deities. However, Deity Shiva is worshipped in the form of a Shivaling. Nataraj, one of the forms of Deity Shiva, is only worshipped in the form of an idol. Shaligrams are also used by Shiva devotees as Shivaling for worship.

      The sattva-predominance of an idol can be measured by undertaking spiritual experiment. If one gets a spiritual experience due to the idol, then we can conclude that the idol is sattvik.

      The sattvikta of the idol depends on various factors. Like bhav, spiritual level, spiritual practice of the sculptor. Else, generally the sattvikta of an idol is 0%. After a devotee worships and consecration of the idol is performed, it’s sattvikta increases. The sattvikta of the idol is maintained depending upon the bhav of the devotee and the atmosphere at home.

      Also, while one tries to perform the spiritual experiment, the accuracy of the answer depends on the sattvikta of the individual performing it. More the sattvikta of the individual more is the percentage of the accuracy in the answer.

      Reply

Leave a Comment