ಭಸ್ಮವನ್ನು ಎಲ್ಲಿ ಹಚ್ಚಿಕೊಳ್ಳಬೇಕು? ಹೇಗೆ ಹಚ್ಚಿಕೊಳ್ಳಬೇಕು?
‘ಓಂ ನಮಃ ಶಿವಾಯ’ ಎಂಬ ಮಂತ್ರವನ್ನು ಹೇಳುತ್ತಾ ಭಸ್ಮವನ್ನು ಬಲಗೈಯ ಮಧ್ಯದ ಮೂರು ಬೆರಳುಗಳಿಂದ ಹಣೆ, ಹೃದಯ (ಎದೆ), ನಾಭಿ ಮತ್ತು ಕಂಠದ ಮೇಲೆ ಅಡ್ಡವಾಗಿ ಹಚ್ಚಬೇಕು.
‘ಓಂ ನಮಃ ಶಿವಾಯ’ ಎಂಬ ಮಂತ್ರವನ್ನು ಹೇಳುತ್ತಾ ಭಸ್ಮವನ್ನು ಬಲಗೈಯ ಮಧ್ಯದ ಮೂರು ಬೆರಳುಗಳಿಂದ ಹಣೆ, ಹೃದಯ (ಎದೆ), ನಾಭಿ ಮತ್ತು ಕಂಠದ ಮೇಲೆ ಅಡ್ಡವಾಗಿ ಹಚ್ಚಬೇಕು.
೧. ಪೃಥ್ವಿ : ಪೃಥ್ವಿಯಂತೆ ಸಹನಶೀಲ ಹಾಗೂ ತಾಳ್ಮೆಯುಳ್ಳವನಾಗಿರಬೇಕು. ೨. ವಾಯು : ವಾಯುವಿನಂತೆ ವಿರಕ್ತನಾಗಿರಬೇಕು. ಹೇಗೆ ವಾಯುವು ಶೀತೋಷ್ಣತೆಗಳಲ್ಲಿ ಸಂಚರಿಸುತ್ತಿರುವಾಗಲೂ ಅವುಗಳ ಗುಣ ದೋಷಗಳಲ್ಲಿ ಸಿಲುಕಿಕೊಳ್ಳುವುದಿಲ್ಲವೋ, ಹಾಗೆಯೇ ಮುಮುಕ್ಷುವು ಯಾರ ಗುಣದೋಷಗಳನ್ನೂ ನೋಡದೇ ಶ್ರುತಿ ಪ್ರತಿಪಾದಿತ ಮಾರ್ಗದಲ್ಲಿ ಬಹಳ ಶೀತೋಷ್ಣವಿರುವ ಪ್ರದೇಶದಲ್ಲಿ ಮಾರ್ಗಕ್ರಮಣ ಮಾಡಬೇಕು. ೩. ಆಕಾಶ : ಆತ್ಮವು ಆಕಾಶದಂತೆ ಎಲ್ಲ ಚರಾಚರ ವಸ್ತುಗಳನ್ನು ವ್ಯಾಪಿಸಿದೆ, ಆದರೂ ಅದು ನಿರ್ವಿಕಾರ, ಎಲ್ಲರೊಂದಿಗೆ ಸಮಾನತೆಯನ್ನಿಟ್ಟುಕೊಳ್ಳುವ, ನಿಃಸಂಗ, ಅಭೇದ, ನಿರ್ಮಲ, ನಿರ್ವೈರ, ಅಲಿಪ್ತ, ಅಚಲ ಮತ್ತು ಒಂದಾಗಿದೆ. … Read more
ಸನಾತನ ನಿರ್ಮಿತ ದತ್ತನ ನಾಮಪಟ್ಟಿಯಲ್ಲಿನ ಅಕ್ಷರಗಳನ್ನು ಸಂತರ ಮಾರ್ಗದರ್ಶನದಲ್ಲಿ ತಯಾರಿಸಿರುವುದರಿಂದ ಅದರಲ್ಲಿ ಅಧಿಕ ಪ್ರಮಾಣದಲ್ಲಿ ಚೈತನ್ಯ ಆಕರ್ಷಿಸುತ್ತಿರುವುದರ ಅರಿವಾಯಿತು.
ಪ್ರಳಯಕಾಲದಲ್ಲಿ ಪಂಚಮಹಾಭೂತಗಳ ಸಮೇತ ಇಡೀ ಜಗತ್ತು ಲಿಂಗದಲ್ಲಿ ಲಯವಾಗುತ್ತದೆ ಮತ್ತು ಸೃಷ್ಟಿಕಾಲದಲ್ಲಿ ಮತ್ತೆ ಅದರಿಂದಲೇ ಸಾಕಾರವಾಗುತ್ತದೆ; ಆದುದರಿಂದ ಅದನ್ನು ಲಿಂಗ ಎನ್ನಲಾಗಿದೆ.
ಭಾರತದಲ್ಲಿನ ಪ್ರಮುಖ ಶಿವಸ್ಥಾನ ಗಳೆಂದರೆ ಹನ್ನೆರಡು ಜ್ಯೋತಿರ್ಲಿಂಗಗಳು. ಅವು ತೇಜಸ್ವಿ ರೂಪದಲ್ಲಿ ಉತ್ಪನ್ನವಾದವು. ಹದಿಮೂರನೆಯ ಪಿಂಡಕ್ಕೆ ಕಾಲಪಿಂಡವೆನ್ನುತ್ತಾರೆ. ಕಾಲದ ಆಚೆಗೆ ಹೋಗಿರುವ ಪಿಂಡವೆಂದರೆ (ದೇಹವೆಂದರೆ) ಕಾಲಪಿಂಡ. ಹನ್ನೆರಡು ಜ್ಯೋತಿರ್ಲಿಂಗಗಳು ಮುಂದಿನಂತಿವೆ. ಹನ್ನೆರಡು ಜ್ಯೋತಿರ್ಲಿಂಗಗಳು ಶರೀರವಾಗಿದ್ದು ಕಾಠಮಾಂಡು (ನೇಪಾಳ) ದಲ್ಲಿರುವ ಪಶುಪತಿನಾಥ ಜ್ಯೋತಿರ್ಲಿಂಗವು ತಲೆಯಾಗಿದೆ. ಜ್ಯೋತಿರ್ಲಿಂಗ ಮತ್ತು ಸಂತರ ಸಮಾಧಿಸ್ಥಳಗಳ ಮಹತ್ವ ಸಂತರು ಸಮಾಧಿಯನ್ನು ಸ್ವೀಕರಿಸಿದ ನಂತರ ಅವರ ಕಾರ್ಯವು ಹೆಚ್ಚು ಪ್ರಮಾಣದಲ್ಲಿ ಸೂಕ್ಷ್ಮದಲ್ಲಿ ನಡೆಯುತ್ತದೆ. ಸಂತರು ದೇಹತ್ಯಾಗ ಮಾಡಿದ ನಂತರ ಅವರ ದೇಹದಿಂದ ಪ್ರಕ್ಷೇಪಿತವಾಗುವ ಚೈತನ್ಯಲಹರಿ ಮತ್ತು … Read more
ಅಕ್ಷ ಎಂದರೆ ಕಣ್ಣು. ‘ರುದ್ರ + ಅಕ್ಷ’ ಎಂದರೆ ಯಾವುದು ಎಲ್ಲವನ್ನೂ ನೋಡಬಲ್ಲದೋ ಮತ್ತು ಮಾಡಬಲ್ಲದೋ ಅದು ರುದ್ರಾಕ್ಷ
ಮಾನಸ ಪೂಜೆ ಎಂದರೆ ನಮ್ಮ ಮನಸ್ಸಿನಲ್ಲಿರುವ ನಮ್ಮ ಇಷ್ಟ ದೇವತೆಯ ರೂಪದ ಪೂಜೆ. ಶ್ರೀ ಆದಿಶಂಕರಾಚಾರ್ಯರು ರಚಿಸಿದ ‘ಶಿವಮಾನಸಪೂಜಾ’ ಸ್ತೋತ್ರವನ್ನು ಪಠಿಸಿ, ಆ ಪರಮ ಶಿವನ ಕೃಪೆಗೆ ಪಾತ್ರರಾಗಿ!
ಪ್ರತಿದಿನ ಶಿವನು ರಾತ್ರಿಯ ೪ ಪ್ರಹರಗಳಲ್ಲಿನ ಒಂದು ಪ್ರಹರ ವಿಶ್ರಾಂತಿ ತೆಗೆದುಕೊಳ್ಳುತ್ತಾನೆ. ಶಿವನು ವಿಶ್ರಾಂತಿ ತೆಗೆದುಕೊಳ್ಳುವ ಒಂದು ಪ್ರಹರ ಎಂದರೆ ಭೂಮಿಯ ಮೇಲಿನ ೩ ಗಂಟೆಗಳು
ಶಿವನಿಗೆ ಹಾಕುವ ಪ್ರದಕ್ಷಿಣೆಯು ಅರ್ಧಚಂದ್ರನಂತೆ, ಅಂದರೆ ಸೋಮಸೂತ್ರಿಯಾಗಿರುತ್ತದೆ.