ಆಷಾಢ ಏಕಾದಶಿ
ಆಷಾಢ ಮಾಸದ ಶುಕ್ಲ ಪಕ್ಷದಲ್ಲಿನ ಏಕಾದಶಿಯನ್ನು ‘ದೇವಶಯನಿ ಏಕಾದಶಿ’ (ಆಷಾಢ ಏಕಾದಶಿ) ಎನ್ನುತ್ತಾರೆ. ಆಷಾಢ ಏಕಾದಶಿಯ ಮಹತ್ವ ತಿಳಿದುಕೊಳ್ಳಿ ಭಕ್ತಿಯಿಂದ ಆಚರಿಸಿ!
ಆಷಾಢ ಮಾಸದ ಶುಕ್ಲ ಪಕ್ಷದಲ್ಲಿನ ಏಕಾದಶಿಯನ್ನು ‘ದೇವಶಯನಿ ಏಕಾದಶಿ’ (ಆಷಾಢ ಏಕಾದಶಿ) ಎನ್ನುತ್ತಾರೆ. ಆಷಾಢ ಏಕಾದಶಿಯ ಮಹತ್ವ ತಿಳಿದುಕೊಳ್ಳಿ ಭಕ್ತಿಯಿಂದ ಆಚರಿಸಿ!
ಹಿಂದೂಗಳಲ್ಲಿ ಅತ್ಯಂತ ಮುಗ್ಧ ಸಾಮಾನ್ಯ ವ್ಯಕ್ತಿಯ ದೃಷ್ಟಿಯಲ್ಲಿ ಕೂಡಾ ‘ಏಕಾದಶಿಯ ಮತ್ತು ಉಪವಾಸ ಎರಡು ಒಂದೇ ಅರ್ಥವುಳ್ಳ ಶಬ್ದಗಳು’ ಆಧ್ಯಾತ್ಮಿಕ ಸಾಧನೆಯಲ್ಲಿ ಆದ ಪಾಪಗಳು, ಪ್ರಾಯಶ್ಚಿತ್ತಗಾಗಿಯೋ ಅಥವಾ ಮನೋವೃತ್ತಿಗಳ ನಿಯಂತ್ರಣಗಳ ಮೂಲಕ ಆತ್ಮ ಸಂಯಮದ ಪ್ರಾಪ್ತಿಗಾಗಿಯೂ ನಿರಶನ ವ್ರತ ಸಹಕಾರಿ ಎನ್ನುವುದು ಹಿಂದೂಗಳ ಶೃದ್ಧೆಯಾಗಿದೆ. ನಿರಾಹಾರದಿಂದ ಮನಸ್ಸಿನ ಮೇಲೆ ಒತ್ತಡ ಕಡಿಮೆಯಾಗುತ್ತದೆ. ಮನದ ನಿಯಮನ ಸುಲಭವಾಗುತ್ತದೆ. ಅಂತರಾತ್ಮದ ಕಡೆ ಅಭಿಮುಖವಾಗಿ ನೆಲೆಗೊಳ್ಳಲು ಸಾಧ್ಯವಾಗುತ್ತದೆ. ಧರ್ಮಶಾಸ್ತ್ರಗಳು ಹೇಳುವಂತೆ ಅಶ್ವಮೇಧ ಸಹಸ್ರಾಣಿ, ವಾಜಪೇಯಾಯುತಾನಿಚ | ಏಕಾದಶೋ ಉಪವಾಸಸ್ಯ ಕಲಂ ನಾರಹಂತಿ … Read more
ವೈಕುಂಠ ಏಕಾದಶಿಯ ದಿನ ಉಪವಾಸವಿದ್ದು, ದೇವಸ್ಥಾನಗಳಿಗೆ ಹೋಗಿ ಭಕ್ತಿಯಿಂದ ದೇವರ ರೂಪವನ್ನು ಸಂದರ್ಶಿಸುವವರಿಗೆ ಮುಂದೆ ಮುಕ್ತಿ ಮತ್ತು ವೈಕುಂಠವನ್ನು ಪ್ರಾಪ್ತವಾಗುತ್ತದೆ ಎಂದು ನಂಬಿಕೆಯಿದೆ
ಏಕಾದಶಿಯನ್ನು ‘ಹರಿದಿನ’ ಎಂದು ಕರೆಯುತ್ತಾರೆ. ಅಂದು ವೈಷ್ಣವೀಶಕ್ತಿ ಜಾಗೃತವಾಗಿ ಕೆಲಸ ಮಾಡುತ್ತದೆ ಎನ್ನುವುದು ತಾತ್ಪರ್ಯ.
ಏಕಾದಶಿಯಂದು ಪೃಥ್ವಿಯ ಮೇಲೆ ಶ್ರೀವಿಷ್ಣುವಿನ ಸ್ಪಂದನಗಳು ಹೆಚ್ಚಿಗೆ ಬರುತ್ತವೆ. ಇತರ ವ್ರತಗಳಂತೆ ಈ ವ್ರತವನ್ನು ಸಂಕಲ್ಪದಿಂದ ವಿಧಿಪೂರ್ವಕವಾಗಿ ಪ್ರಾರಂಭಿಸಬೇಕಾಗುವುದಿಲ್ಲ.