ಮೂರ್ತಿ ವಿಸರ್ಜನೆಯ ಪೂಜೆ ಹೇಗೆ ಮಾಡಬೇಕು?

ಮೂರ್ತಿಯ ವಿಸರ್ಜನೆಯನ್ನು ಯೋಗ್ಯ ದಿನ / ಸಮಯಕ್ಕೆ ಮಾಡಬೇಕು. ಆ ದಿನ ಗಂಧ, ಹೂವುಗಳು, ಧೂಪ, ದೀಪ ಮತ್ತು ನೈವೇದ್ಯಕ್ಕೆ ಮೊಸರು, ಅನ್ನ, ಮೋದಕ ಇತ್ಯಾದಿ ಪದಾರ್ಥಗಳನ್ನು ಪೂಜೆಯಲ್ಲಿ ಬಳಸಬೇಕು. ಉತ್ತರ ಪೂಜೆಯನ್ನು ಪ್ರಾರಂಭಿಸುವ ಮೊದಲು ಪೂಜಕನು ತನಗೆ ಕುಂಕುಮದ ತಿಲಕವನ್ನು ಹಚ್ಚಿಕೊಳ್ಳಬೇಕು. ಆನಂತರ ಆಚಮನ ಮಾಡಿ, ಕೈಯಲ್ಲಿ ಅಕ್ಷತೆಯನ್ನು ಹಿಡಿದು ಮುಂದಿನ ಸಂಕಲ್ಪವನ್ನು ಮಾಡಬೇಕು. ಶ್ರೀ ಉಮಾಮಹೇಶ್ವರಸಹಿತಶ್ರೀಸಿದ್ಧಿವಿನಾಯಕ ದೇವತಾ ಪ್ರೀತ್ಯರ್ಥಂ ಉತ್ತರಾರಾಧನಂ ಕರಿಷ್ಯೆ | ತದಂಗತ್ವೇನ ಧ್ಯಾನಗಂಧಾದಿಪಂಚೋಪಚಾರಪೂಜನಮಹಂ ಕರಿಷ್ಯೆ | ಶ್ರೀ ಉಮಾಮಹೇಶ್ವರಸಹಿತಶ್ರೀಸಿದ್ಧಿವಿನಾಯಕಾಯ ನಮಃ | … Read more

ಗಣೇಶಮೂರ್ತಿಯನ್ನು ಯೋಗ್ಯ ಪದ್ಧತಿಯಲ್ಲಿ ವಿಸರ್ಜನೆ ಮಾಡಿ!

ಕೆಲವೊಂದು ಸ್ಥಳಗಳಲ್ಲಿ ಜಲಾಶಯಗಳಲ್ಲಿ (ಬಾವಿ, ಕೆರೆ, ನದಿ ಇತ್ಯಾದಿಗಳಲ್ಲಿ) ಗಣೇಶ ಮೂರ್ತಿಯ ವಿಸರ್ಜನೆಗೆ ಬೇಕಾಗುವಷ್ಟು ನೀರು ಇರುವುದಿಲ್ಲ ಅಥವಾ ಕಲುಷಿತವಾಗಿರುತ್ತದೆ. ಆಗ ಮುಂದಿನ ಉಪಾಯ ಮಾಡಬೇಕು.